ಚಿಕ್ಕಮಗಳೂರು: ರಕ್ಷಣೆ ಮಾಡಿದ ಹಾವಿನಿಂದಲೇ ಕಡಿತ; ಉರಗತಜ್ಞ ಸಾವು

Update: 2023-05-30 13:23 GMT

ಚಿಕ್ಕಮಗಳೂರು: ಹಾವು ಕಚ್ಚಿ ಉರಗತಜ್ಞರೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನರೇಶ್ (51) ಎಂದು ಗುರುತಿಸಲಾಗಿದೆ. 

ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ನರೇಶ್ ಅರವು ಚಿಕ್ಕಮಗಳೂರು ಜಿಲ್ಲೆಯಾದ್ಯಂತ 'ಸ್ನೇಕ್ ನರೇಶ್' ಎಂದೇ ಖ್ಯಾತಿ ಪಡೆದಿದ್ದರು. ಅವರು ಸೆರೆ ಹಿಡಿದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. 

ಸಾವಿರಾರು ಹಾವುಗಳನ್ನ ಸೆರೆ ಹಿಡಿದಿದ್ದ ಸ್ನೇಕ್‌ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೆ ಕೂಡಾ ಸ್ಪರ್ಧಿಸಿದ್ದರು.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಘಟನೆ ನಡೆದಿದ್ದು, ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ಅವರಿಗೆ ಮಧ್ಯಾಹ್ನ ಮತ್ತೊಂದು ಹಾವು ಹಿಡಿಯಲು ಕರೆ ಬಂದಿತ್ತು. 
ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದಾಗ ಕೂಡಲೇ ನಾಗರಹಾವು ಕಚ್ಚಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ನರೇಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Similar News