ಒಲಿಂಪಿಕ್ ಪದಕಗಳನ್ನು ಗಂಗಾನದಿಗೆ ಎಸೆಯುವ ನಿರ್ಧಾರ ಮುಂದೂಡಿದ ಕುಸ್ತಿಪಟುಗಳು
Update: 2023-05-30 14:57 GMT
ಹರಿದ್ವಾರ: ಕುಸ್ತಿ ಅಸೋಶಿಯೇಶನ್ ನ ಅಧ್ಯಕ್ಷ ಬ್ರಿಜ್ಭೂಷಣ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿರುವ ಕುಸ್ತಿ ಪಟುಗಳು ತಮ್ಮ ಒಲಿಂಪಿಕ್ ಪದಕಗಳನ್ನು ಹರಿದ್ವಾರದ ಗಂಗಾ ನದಿಗೆ ಎಸೆಯುವ ನಿರ್ಧಾರವನ್ನು ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ. ರೈತ ಮುಖಂಡರೋರ್ವರು ಅವರ ಮನವೊಲಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
ಒಲಿಂಪಿಕ್ ಪದಕ ವಿಜೇತರಾಗಿರುವ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಹಾಗೂ ಸಂಗೀತಾ ಫೋಗಟ್ ತಮ್ಮ ಮೆಡಲ್ಗಳನ್ನು ನದಿಗೆಸೆಯಲು ಸಿದ್ಧರಾಗಿದ್ದು ಬಳಿಕ ಇದೀಗ ಸರಕಾರಕ್ಕೆ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲು ಐದು ದಿನಗಳ ಗಡುವನ್ನು ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.