ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಘೋಷಣೆ ಬಗ್ಗೆ ಅಂತಿಮ ತೀರ್ಮಾನ: ಸಿದ್ದರಾಮಯ್ಯ

Update: 2023-05-31 09:52 GMT

ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಸಚಿವರ ಜೊತೆಗಿನ ಸಭೆ ಮುಕ್ತಾಯಗೊಂಡಿದ್ದು, ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಘೋಷಣೆ ಬಗ್ಗೆ ಅಂತಿಮ ತೀರ್ಮಾನ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು- ಅಧಿಕಾರಿಗಳಿಂದ ಎಲ್ಲ ಮಾಹಿತಿ ಪಡೆದಿದ್ದೇನೆ. ಐದೂ ಗ್ಯಾರಂಟಿ ಜಾರಿ ಖಚಿತ. ಎಲ್ಲ ಗ್ಯಾರಂಟಿಗಳ ಬಗ್ಗೆ ಪ್ರೆಸೆಂಟೇಶನ್ ತಯಾರಾಗಿದೆ.ಎಲ್ಲ ಸಚಿವರೂ ಅದನ್ನು ವೀಕ್ಷಿಸಿದ್ದಾರೆ. ಶುಕ್ರವಾರ ಕರೆದಿರುವ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ತೀರ್ಮಾನ ಮಾಡಿ ನಂತರ ತಿಳಿಸುತ್ತೇವೆ ಎಂದು ಹೇಳಿದರು.

ಬಿಜೆಪಿಯವರ ಹೇಳಿಕೆಗಳ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರು ಮೊದಲು ಹೇಳಿದ್ದನ್ನು ಮಾಡಲಿ. ನಾವು ಮಾಡುತ್ತೇವೆ. ಹಿಂದೆ ಮಾಡಿದ್ದೆವು. ಮುಂದೆಯೂ ಮಾಡುತ್ತೇವೆ ಎಂದು ತಿಳಿಸಿದರು.

Similar News