ಕರ್ನಾಟಕದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ಅನುಸರಿಸುವುದಿಲ್ಲ: ಡಿ.ಕೆ. ಶಿವಕುಮಾರ್‌

Update: 2023-05-31 13:40 GMT

ಬೆಂಗಳೂರು: ಕರ್ನಾಟಕದಲ್ಲಿ ನಾಗ್ಪುರ ಶಿಕ್ಷಣ ನೀತಿ ಅನುಸರಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಹೇಳಿದ್ದಾರೆ. 

ಕಾಂಗ್ರೆಸ್ ರೂಪಿಸಿರುವ ಪ್ರಣಾಳಿಕೆಯನ್ನು ಪ್ರಸ್ತಾಪಿಸಿದ ಡಿಕೆಶಿ, ‘ಕರ್ನಾಟಕವು ರಾಜ್ಯ ಶಿಕ್ಷಣ ನೀತಿಯನ್ನು ಹೊಂದಿರುತ್ತದೆ, ನಾಗಪುರ ಶಿಕ್ಷಣ ನೀತಿಯನ್ನಲ್ಲ’ ಎಂದು  ಹೇಳಿದ್ದಾರೆ. 

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, "ನಾವು ಪ್ರಣಾಳಿಕೆಯನ್ನು ಹೊರತಂದಿದ್ದೇವೆ, ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿ ಇರುತ್ತದೆ, ನಾಗ್ಪುರ ಶಿಕ್ಷಣ ನೀತಿ ಇರುವುದಿಲ್ಲ, ನಾವು ಈ ಬಗ್ಗೆ ಸುದೀರ್ಘವಾಗಿ ಚರ್ಚಿಸುತ್ತೇವೆ.." ಎಂದು ಹೇಳಿದ್ದಾರೆ.

Similar News