ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲು

Update: 2023-05-31 16:04 GMT

ಮಂಗಳೂರು, ಮೇ 31: ನಗರದ ಉರ್ವ, ಕಂಕನಾಡಿ ನಗರ ಮತ್ತು ಮಂಗಳೂರು ಉತ್ತರ ಠಾಣಾ ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉರ್ವಸ್ಟೋರ್ ತುಳುಭವನದ ಬಳಿ ಸಂಜೆ 5ಕ್ಕೆ ಸಾರ್ವಜನಿಕ ರಸ್ತೆ ಬದಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ನಿಂತುಕೊಂಡು ಸಿಗರೇಟು ಸೇದುತ್ತಿದ್ದ ಕುಂಜತ್ತಬೈಲ್‌ನ ಹರೀಶ್(22)ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಅಸ್ಪಷ್ಟವಾಗಿ ಮಾತನಾಡುತ್ತಿದ್ದ. ಆತನ ಬಾಯಿಯಿಂದ ಗಾಂಜಾ ವಾಸನೆ ಬರುತ್ತಿತ್ತು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಮತ್ತೊದು ಪ್ರಕರಣದಲ್ಲಿ ಬೆಳಗ್ಗೆ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕುದ್ರೋಳಿ ಪರಿಸರದ ಬಳಿ 11:30ಕ್ಕೆ ಅಮಲಿನಿಂದ ತೂರಾಡುತ್ತಿದ್ದ ವ್ಯಕ್ತಿಯ ಬಗ್ಗೆ ಸಂಶಯಗೊಂಡು ವಿಚಾರಿಸಿದಾಗ ಆತ ಕುದ್ರೋಳಿಯ ಅಬ್ದುಲ್ ರಹೀಂ(49) ಎಂಬುದಾಗಿ ತಿಳಿದುಬಂದಿದೆ. ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದೆ. ಆತನನ್ನು ಎನ್‌ಡಿಪಿಎಸ್ ಪರೀಕ್ಷೆಗೊಳಪಡಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ನಗರದ ನೀತಿನಗರ ಮೈದಾನದಲ್ಲಿ ಗಾಂಜಾ ಸೇವನೆ ಮಾಡಿದ್ದ ಕಿರಣ್ ಎಂಬಾತನನ್ನು ಬಂದರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News