ಬೆಂಗಳೂರು: ಮಹಿಳೆಯ ಬರ್ಬರ ಹತ್ಯೆ

Update: 2023-06-01 09:19 GMT

ಬೆಂಗಳೂರು, ಜೂ 01: ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈಯ್ಯಲಾದ ಘಟನೆ ಬನ್ನೇರುಘಟ್ಟದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜನತಾ ಕಾಲೋನಿ ನಿವಾಸಿ ಗೀತಮ್ಮ(53) ಮೃತ ಮಹಿಳೆ. ಮೂರ್ನಾಲ್ಕು ದಿನಗಳ ಹಿಂದೆ ಮಹಿಳೆಯ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಮನೆಯ ಸಮೀಪವೇ ಕೈ ಕಾಲು ರುಂಡ ಕತ್ತರಿಸಿ ಎಸೆಯಲ್ಪಟ್ಟು ನಗ್ನ ಸ್ಥಿತಿಯಲ್ಲಿ ಕೊಳೆತ ಶವ ಪತ್ತೆಯಾಗಿದೆ.

ಉತ್ತರ ಭಾರತ ಮೂಲದ ಮೂರ್ನಾಲ್ಕು ಮಂದಿ ಗೀತಮ್ಮಳ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಮೂರ್ನಾಲ್ಕು ದಿನಗಳಿಂದ ಬಾಡಿಗೆಗೆ ಇದ್ದ ಯುವಕರು ನಾಪತ್ತೆಯಾಗಿದ್ದು ಇವರೊಂದಿಗೆ ಗೀತಮ್ಮ ಕೂಡಾ ಕಾಣೆಯಾಗಿದ್ದಳು. ಮೇಲ್ನೋಟಕ್ಕೆ ಅವರಿಂದಲೇ ಕೊಲೆ ನಡೆದಿರುವ ಬಗ್ಗೆ  ಶಂಕೆ ವ್ಯಕ್ತವಾಗಿದೆ.

ಬನ್ನೇರುಘಟ್ಟ ಪರಿಸರದಲ್ಲಿ  ಭೀತಿಯ ವಾತಾವರಣವುಂಟಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಧಾವಿಸಿದ್ದಾರೆ.

Similar News