ಜನಾರ್ದನ ರೆಡ್ಡಿ ರಣಹೇಡಿ: ಸಹೋದರನ ವಿರುದ್ಧವೇ ಸೋಮಶೇಖರ ರೆಡ್ಡಿ ಆಕ್ರೋಶ

''ನಮ್ಮನ್ನ ಬಳಸಿಕೊಂಡು ಅಕ್ರಮವಾಗಿ ಹಣ ಗಳಿಸಿದ...''

Update: 2023-06-01 11:33 GMT

ಬಳ್ಳಾರಿ: 'ನಿಜವಾದ ರಣಹೇಡಿ ಜನಾರ್ದನರೆಡ್ಡಿ' ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ತಮ್ಮ ಸಹೋದರನ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ನಾನು ಬೆಳಸಿದ ಹೇಡಿಗಳು ಮನೆಯಲ್ಲಿದ್ದಾರೆ. ನಾನು ಸದನಕ್ಕೆ ಬಂದಿದ್ದೇನೆ ಅಂತಾ ಜನಾರ್ದನರೆಡ್ಡಿ ಹೇಳಿದ್ದಾರೆ. ನನಗೆ ಮತ್ತು ಶ್ರೀರಾಮುಲು, ಸೋಮಲಿಂಗಪ್ಪ, ಸುರೇಶಬಾಬು, ಕರುಣಾಕರರೆಡ್ಡಿಗೆ ರಣಹೇಡಿ ಅಂತಾ ಕರೆದಿದ್ದಾರೆ. ಆದರೆ ನಿಜವಾದ ರಣಹೇಡಿ ಜನಾರ್ದನರೆಡ್ಡಿ; ನಾವಲ್ಲ'' ಎಂದು ಕಿಡಿಕಾರಿದರು.

''ಅವನು (ಜನಾರ್ದನರೆಡ್ಡಿ) ನಮ್ಮನ್ನ ಬಳಸಿಕೊಂಡು ಅವನ ಬೇಳೆ ಬೇಯಿಸಿಕೊಂಡ. ನಮ್ಮನ್ನ ಬಳಸಿಕೊಂಡು ಜನಾರ್ದನರೆಡ್ಡಿ ಅಕ್ರಮವಾಗಿ ಹಣ ಗಳಿಸಿದ. ನಿಜವಾದ ರಣಹೇಡಿ ನಾವಲ್ಲ, ಜನಾರ್ದನರೆಡ್ಡಿ ರಣಹೇಡಿ ಎಂದು ಆಕ್ರೋಶ ಹೊರ ಹಾಕಿದರು. 

ಅಷ್ಟೇ ಅಲ್ಲ. ಜನಾರ್ದನ ರೆಡ್ಡಿಯ ಚಿಕ್ಕಂದಿನಿಂದ ಒಂದು ಗುಣವನ್ನು ಜಾಲಾಡಿದ್ದಾರೆ. ಯಾರೇ ಆಗಲಿ ಅವರೆಲ್ಲಾ ಅವನ ಕೈ ಕೆಳಗೆ ಇರಬೇಕು. ಅವನು ಹೇಳಿದ್ದು ಕೇಳಲಿಲ್ಲ ಅಂದ್ರೆ ಅವನು ಎಲ್ಲರನ್ನೂ ಡೆಮಾಲಿಷ್ ಮಾಡ್ತಾನೆ. ಆದರೆ ಇಂದು ನಾವೆಲ್ಲಾ ಒಂದಾಗಿದ್ದೇವೆ. ನಾವೂ ಜನಾರ್ದನರೆಡ್ಡಿಯನ್ನ ಎದುರಿಸುತ್ತೇವೆ. ಮುಂದೆ ಸಂಸತ್ ಚುನಾವಣೆಯಲ್ಲಿ ನಮ್ಮ ಬಲ ತೋರಿಸುತ್ತೇವೆ'' ಎಂದು ತಮ್ಮನಿಗೆ ಸವಾಲು ಹಾಕಿದರು. 

Similar News