ಕಂದಾಯ, ಅರಣ್ಯ, ಮೆಸ್ಕಾಂ ಅಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

Update: 2023-06-01 15:03 GMT

ಕಾಪು, ಜೂ.1: ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಂದು ಕಂದಾಯ ಇಲಾಖಾ ಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪದ ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡದೆ ಸಂತ್ರಸ್ತರಿಗೆ ತಕ್ಷಣದಲ್ಲಿ ಪರಿಹಾರ ಒದಗಿಸಬೇಕು. ಅರಣ್ಯ ಇಲಾಖೆ ಅಧಿಕಾರಿ ಗಳು ಅಪಾಯಕಾರಿ ಮರಗಳ ತೆರವಿಗೆ ಮೆಸ್ಕಾಂ ಅಧಿಕಾರಿಗಳ ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

94 ಸಿ ಹಾಗೂ 94 ಸಿ.ಸಿ ಅಡಿ ಬಾಕಿ ಇರುವ ಹಕ್ಕು ಪತ್ರಗಳ ವಿತರಣೆಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಗಳ ಹಾಗೂ ಭೂ ಪರಿವರ್ತನಾ ಕಡತಗಳನ್ನು ವಿಳಂಬ ಮಾಡದೆ ಶೀಘ್ರ ವಿಲೇವಾರಿ ಮಾಡಬೇಕು ಎಂದು ಗುರ್ಮೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ ಶ್ರೀನಿವಾಸ್ ಕುಲಕರ್ಣಿ, ಉಡುಪಿ ತಹಶೀಲ್ದಾರ ರವಿ ಅಂಗಡಿ, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ಹೆಬ್ರಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Similar News