ಜೂ.3, 4: ಸಿರಿಬಾಗಿಲಿನಲ್ಲಿ 'ಗಡಿನಾಡ ಕಲಾ ಸಾಂಸ್ಕೃತಿಕ ಉತ್ಸವ'

Update: 2023-06-02 05:07 GMT

ಕಾಸರಗೋಡು, ಜೂ. 2: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ಜೂ.3 ಮತ್ತು 4ರಂದು 'ಗಡಿನಾಡ ಕಲಾ ಸಾಂಸ್ಕೃತಿಕ ಉತ್ಸವ-2023' ನಡೆಯಲಿದೆ.

ಜೂ.3ರಂದು ಬೆಳಗ್ಗೆ 10ಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟ ಸುವರು. ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಅಧ್ಯಕ್ಷತೆ ವಹಿಸುವರು.

11ಕ್ಕೆ ಪುತ್ತಿಗೆ ರಾಮಕೃಷ್ಣ ಜೋಯಿಸ ವಿರಚಿತ ಶ್ರೀ ರಾಮ ನಿಜ ಪಟ್ಟಾಭಿಷೇಕ ಪ್ರಸಂಗದ ಅಗ್ನಿ ಪರೀಕ್ಷೆ' ತಾಳಮದ್ದಲೆ ರೂಪದಲ್ಲಿ ಪ್ರಸ್ತುತಿಗೊಳ್ಳಲಿದೆ. ಅಪರಾಹ್ನ 2:30ರಿಂದ ಗಮಕ ವಾಚನ ಶ್ರೀಹರಿ ಭಟ್, 4ರಿಂದ ಕಲಾರತ್ನ ಶಂ.ನಾ. ಅಡಿಗ ಕುಂಬ್ಳೆಯವರಿಂದ ಹರಿಕಥೆ, ಬಳಿಕ ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ಪ್ರಸ್ತುತಪಡಿಸುವ ನೃತ್ಯಹಂ ನಡೆಯಲಿದೆ.

ಜೂ.4ರಂದು ಬೆಳಗ್ಗೆ ರಾಧಾಕೃಷ್ಣಕೆ. ಉಳಿಯತ್ತಡ್ಕ ಅಧ್ಯಕ್ಷತೆಯಲ್ಲಿ ಕವಿ ಗೋಷ್ಠಿ, ಕವನ ಗೋಷ್ಠಿ, ಅವಲೋಕನ ನಡೆಯಲಿದೆ. ಈ ಗೋಷ್ಠಿಯನ್ನು ಸೀತಾಲಕ್ಷ್ಮೀ ವರ್ಮ ವಿಟ್ಲ ಉದ್ಘಾ ಟಿಸಲಿದ್ದಾರೆ. ಅಪರಾಹ್ನ 2ಕ್ಕೆ ಗಡಿನಾಡಿನ ಕಲೆ-ಸಾಹಿತ್ಯ- ಸಂಸ್ಕೃತಿ ಉಳಿಸಿ, ಬೆಳೆಸುವಲ್ಲಿ ಕೀರ್ತಿಶೇಷರ ಕೊಡುಗೆಗಳ ಬಗ್ಗೆ ವಿಚಾರ ಸಂಕಿರಣ ನಡೆಯಲಿದೆ. ಪ್ರಸಂಗಕರ್ತರಾದ ಶ್ರೀಧರ ಡಿ.ಎಸ್‌. ಅಧ್ಯಕ್ಷತೆ ವಹಿಸುವರು.

ಸಮಾರೋಪ ಸಮಾರಂಭದಲ್ಲಿ ಕಸಾಪ ಕರ್ನಾಟಕ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವರು. ಸಾಂಸ್ಕೃತಿಕ ಸಾಹಿತ್ಯ ಕ್ಷೇತ್ರದ ಸಾಧಕರಾದ ವಿದ್ವಾನ್ ಬಾಬು ರೈ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪೂಕಳ ಲಕ್ಷ್ಮೀ ನಾರಾಯಣ ಭಟ್‌ರಿಗೆ ಗಡಿನಾಡ ಸಿರಿ- ಸಿರಿಬಾಗಿಲು ಪ್ರಶಸ್ತಿ ನೀಡಿ ಗೌರವಿಸಲಾಗುವುದು, ಸಂಜೆ 6ರಿಂದ ಮಧೂರು ಕ್ಷೇತ್ರದ ಚಾರಿತ್ರಿಕ ಕತೆ ಮಧುಪುರ ಮಹಾತ್ಮ ಯಕ್ಷಗಾನ ಬಯಲಾಟ ಪ್ರಸಿದ್ದ ಕಲಾವಿದರಿಂದ ನಡೆಯಲಿದೆ ಎಂದು ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News