ಮೈಸೂರಿನ ಟಿ.ನರಸೀಪುರ ಬಳಿ ಭೀಕರ ರಸ್ತೆ ಅಪಘಾತ ಪ್ರಕರಣ: ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

Update: 2023-06-02 05:19 GMT

ಮೈಸೂರು:  ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಮೇ 29ರಂದು (ಸೋಮವಾರ) ಮಧ್ಯಾಹ್ನ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಳ್ಳಾರಿ ಮೂಲದ ಶಶಿಕುಮಾರ್ ಚಿಕಿತ್ಸೆ ಫಲಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿರುವುದು ವರದಿಯಾಗಿದೆ. 

ಮೇ 29ರಂದು ಕೊಳ್ಳೇಗಾಲ- ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಶ್ರೀರಂಗಪಟ್ಟಣದ ಕಾರು ಚಾಲಕ ಸೇರಿ 10 ಮಂದಿ ಮೃತಪಟ್ಟಿದ್ದರು. 

Similar News