ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಕೊಪ್ಪಳ ವಿವಿ ಲಾಂಛನ ಅನಾವರಣ

Update: 2023-06-02 08:31 GMT

ಬೆಂಗಳೂರು, ಜೂ.2: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ ಡಾ.ದೇಶಪಾಂಡೆ, ಚಾಮರಾಜ ನಗರ ವಿವಿ ಕುಲಪತಿ ಡಾ.ಗಂಗಾಧರ್, ಬೀದರ್ ವಿವಿ ಕುಲಪತಿ ಡಾ.ಬಿರಾದಾರ್, ಹಾಸನ ವಿವಿ ಕುಲಪತಿ ಡಾ. ತಾರಾನಾಥ್, ಹಾವೇರಿ ವಿವಿ ಕುಲಪತಿ ಡಾ.ಸುರೇಶ ಎಚ್.ಜಂಗಮಶೆಟ್ಟಿ ಉಪಸ್ಥಿತರಿದ್ದರು.

Similar News