ಜುಲೈ 1 ರಿಂದ BPL ಕಾರ್ಡ್​ದಾರರಿಗೆ ಮಾಸಿಕ 10 ಕೆ.ಜಿ ಅಕ್ಕಿ: ಸಿಎಂ ಸಿದ್ದರಾಮಯ್ಯ

Update: 2023-06-02 11:41 GMT

ಬೆಂಗಳೂರು: ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

'ಜೂನ್‌ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಹಾಗೂ ಆಹಾರ ಧಾನ್ಯ ಖರೀದಿಸಬೇಕಾಗಿರುವುದರಿಂದ ಜುಲೈ 1 ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ಅಂತ್ಯೋದಯ ಕಾರ್ಡುದಾರರು ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ' ಎಂದರು. 

Similar News