ಉಡುಪಿ: ಸಿಡಿಲು ಬಡಿದು 2 ಮನೆಗಳಿಗೆ ಹಾನಿ

Update: 2023-06-02 14:31 GMT

ಉಡುಪಿ, ಜೂ.2: ಕಳೆದ ಬುಧವಾರ ಗಾಳಿ-ಮಳೆಯೊಂದಿಗೆ ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾದ ಬಗ್ಗೆ ವರದಿಗಳು ಬಂದಿವೆ.

ಉಡುಪಿ ತಾಲೂಕು ಹಿರೇಬೆಟ್ಟು ಗ್ರಾಮದ ರಾಮ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ಭಾಗಶ: ಹಾನಿ ಸಂಭವಿಸಿದ್ದು, 30ಸಾವಿರ ರೂ.ಗಳಿಗೂ ಅಧಿಕ ನಷ್ಟ ಉಂಟಾಗಿದೆ. ಅದೇ ರೀತಿ ಕಾಪು ತಾಲೂಕು ಬೆಳ್ಳೆ ಗ್ರಾಮದ ಸುಂದರ ಮೂಲ್ಯ ಎಂಬವರ ಮನೆಗೂ ಸಿಡಿಲು ಬಡಿದಿದ್ದು, ಭಾಗಶ: ಹಾನಿಯಾಗಿದೆ. ಇಲ್ಲೂ 20 ಸಾವಿರ ರೂ.ನಷ್ಟ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಬಾರಿ ಮುಂಗಾರು ಪೂರ್ವ ಮಳೆ ಕರಾವಳಿ ಜಿಲ್ಲೆಗಳಿಗೆ ಸಂಪೂರ್ಣ ಕೈಕೊಟ್ಟಿದ್ದು, ಜೂನ್ ಪ್ರಾರಂಭ ಗೊಂಡರೂ ಮಳೆಗಾಲ ಪ್ರಾರಂಭಗೊಳ್ಳುವ ಯಾವುದೇ ಸೂಚನೆ ಕಂಡುಬರುತ್ತಿಲ್ಲ. ಬೆಳಗ್ಗೆ ಮತ್ತು ಸಂಜೆಯ ವೇಳೆ ಮೋಡ ಕವಿದ ವಾತಾವರಣ ಇದ್ದರೂ, ಗುಡುಗು, ಸಿಡಿಲು ಹಾಗೂ ಹನಿ ಮಳೆಗೆ ಸೀಮಿತಗೊಳ್ಳುತ್ತಿದೆ. ಜಿರಾಪಟಿ ಮಳೆ ಸುರಿಯುವ ಯಾವ ಲಕ್ಷಣಗಳು ಇದುವರೆಗೆ ಕಾಣಿಸಿಲ್ಲ. ಇದರಿಂದ ಕೃಷಿ ಕ್ಷೇತ್ರ ಸಮಸ್ಯೆ ಎದುರಿಸುವಂತಾಗಿದೆ.

Similar News