ಗ್ಯಾರಂಟಿ ಅನುಷ್ಠಾನ : ಕುಂದಾಪುರ ಬ್ಲಾಕ್ ಕಾಂಗ್ರೆಸ್ ಹರ್ಷ

Update: 2023-06-02 15:45 GMT

ಕುಂದಾಪುರ, ಜೂ.2: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿರುವುದಕ್ಕೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹರ್ಷ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮುಖಂಡರು ಗ್ಯಾರಂಟಿ ಬಗ್ಗೆ ಟೀಕೆ ಮತ್ತು ಲೇವಡಿ ಮಾಡಿ ಗ್ಯಾರಂಟಿಗೆ ವಾರಂಟಿ ಇಲ್ಲ ಮತ್ತು ಗ್ಯಾರಂಟಿ ಪುಸ್ತಕದೊಳಗಿನ ನವಿಲ ಗಿರಿ ಎಂದಿದ್ದರು. ಗ್ಯಾರಂಟಿ ಅನುಮೋದನೆ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತು ಮತ್ತು ಕೃತಿಗೆ ಹತ್ತಿರ ಇರುವುದು ಮತ್ತು ಬದ್ಧತೆಯನ್ನು ತೋರಿಸುತ್ತದೆ. ಗ್ಯಾರಂಟಿ ಬಗ್ಗೆ ಬೇಕಾಬಿಟ್ಟಿ ಮಾತನಾಡಿದವರು ಈಗ ಉತ್ತರಿಸ ಬೇಕಾಗಿದೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತೇವೆ. ವಾರ್ಷಿಕ ಕೋಟಿ ಉದ್ಯೋಗ ಸೃಷ್ಟಿ ಮಾಡ ಲಾಗುವುದು ಮತ್ತು ರೈತರ ಆಧಾಯ ದ್ವಿಗುಣ ಮಾಡಲಾಗುವುದು ಎಂದು ನೀಡಿದ ಭರವಸೆ ಈಡೇರಿಸಲಿ ಪ್ರಕಟಣೆಯಲ್ಲಿ ಅವರು ಒತ್ತಾಯಿಸಿದ್ದಾರೆ.

Similar News