ಪೈವಳಿಕೆ: ಅಣ್ಣನಿಂದ ತಮ್ಮನ ಕೊಲೆ

Update: 2023-06-03 05:38 GMT

ಮಂಜೇಶ್ವರ, ಜೂ.3: ತಮ್ಮ ನನ್ನು ಅಣ್ಣನೇ ಇರಿದು ಕೊಲೆಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಪೈವಳಿಕೆ ಕಳಾಯಿ ನಿವಾಸಿ ಪ್ರಭಾಕರ ನೋಂಡಾ (40) ಕೊಲೆಗೀಡಾದವರು. ಮೃತರ ಸಹೋದರ ಜಯರಾಮ ನೋಂಡಾ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 

ಸಹೋದರರ ನಡುವಿನ ವೈಷಮ್ಯ ಕೊಲೆಗೆ ಕಾರಣ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

ಪ್ರಭಾಕರ  ವಿರುದ್ಧ ಹಲವು ಪ್ರಕರಣಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Similar News