ಆನೆ ದಾಳಿ ಸಾವು, ರೈಲು ದುರಂತ: ಅರಣ್ಯ ಸಚಿವರ ಅಭಿನಂದನಾ ಸಮಾರಂಭ ಮುಂದೂಡಿಕೆ

Update: 2023-06-03 09:21 GMT

ಬೆಂಗಳೂರು, ಜೂ.3: ಒಡಿಶಾ ರೈಲು ದುರಂತದಲ್ಲಿ 200ಕ್ಕೂ ಹೆಚ್ಚು ಮುಗ್ಧ ಪ್ರಯಾಣಿಕರು ಮತ್ತು ರಾಜ್ಯದಲ್ಲಿ 3 ದಿನಗಳ ಅಂತರದಲ್ಲಿ ಇಬ್ಬರು ಆನೆ ತುಳಿತದಿಂದ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಪೌರಾಡಳಿತ ಸಚಿವರಾದ ರಹೀಮ್ ಖಾನ್ ಅವರು ಬೀದರ್ ನಲ್ಲಿ ಆಯೋಜಿಸಲಾಗಿದ್ದ ತಮ್ಮ ಅಭಿನಂದನಾ ಸಮಾರಂಭವನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ನೂರಾರು ಕುಟುಂಬಗಳು ರೈಲು ದುರಂತದಿಂದಾಗಿ ದುಃಖದ ಮಡುವಿನಲ್ಲಿ ಮುಳುಗಿರುವಾಗ ಸನ್ಮಾನ ಸ್ವೀಕರಿಸಲು ತಮ್ಮ ಮನಸ್ಸು ಒಪ್ಪುತ್ತಿಲ್ಲ ಹೀಗಾಗಿ ಅಭಿನಂದನಾ ಸಮಾರಂಭ ಮುಂದೂಡುವಂತೆ ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮನವಿ ಮಾಡಿರುವುದಾಗಿ ಇಬ್ಬರೂ ಸಚಿವರು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಆಪ್ತರ ನೋವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Similar News