ಪ್ರತಿಭಾನ್ವಿತ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾ ನಮ್ಮ ನಾಡ ಒಕ್ಕೂಟ ವತಿಯಿಂದ ಸನ್ಮಾನ

Update: 2023-06-03 14:09 GMT

ಉಡುಪಿ, ಜೂ.3: ಉಡುಪಿ ಜಿಲ್ಲಾ ನಮ್ಮ ನಾಡ ಒಕ್ಕೂಟದ ವತಿಯಿಂದ ಜಿಲ್ಲೆಯ ಎಸೆಸೆಲ್ಸಿ ಮತ್ತು ಪಿಯುಸಿಯ 280 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಸನ್ಮಾನ ಹಾಗೂ ಕೇರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಉಡುಪಿಯ ಮಣಿಪಾಲ ಇನ್ ಹೊಟೇಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸ ಲಾಗಿತ್ತು.

ಒಕ್ಕೂಟದ ಯುಎಇ ಅಧ್ಯಕ್ಷ ಸಲೀಂ ಬಾಜಿ ಮಾತನಾಡಿ, ಪ್ರಸ್ತುತ ಸಮಾಜ ದಲ್ಲಿನ ಸ್ಥಿತಿಗತಿಯ ಬಗ್ಗೆ ಒಗ್ಗಟ್ಟಿನಲ್ಲಿ ಸ್ಪಂದಿಸಬೇಕಾಗಿದೆ. ನಮ್ಮತನ ಉಳಿವಿಗಾಗಿ ಶ್ರಮಿಸಬೇಕು. ಇದಕ್ಕೆ ಶಿಕ್ಷಣ ಅತೀ ಅಗತ್ಯ. ಇಸ್ಲಾಮ್ ಧರ್ಮದಲ್ಲಿ ಶಿಕ್ಷಣಕ್ಕೆ ಬಹಳಷ್ಟು ಆದ್ಯತೆ ನೀಡಲಾಗಿದೆ. ಶಿಕ್ಷಣ ಪಡೆದುಕೊಂಡರೆ ಎಲ್ಲ ರೀತಿಯಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಆ ಮೂಲಕ ಸಮುದಾಯ ಇನ್ನಷ್ಟು ಬಲಿಷ್ಠ ಆಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ನಮ್ಮ ನಾಡ ಒಕ್ಕೂಟದ ಸ್ಥಾಪಕಾಧ್ಯಕ್ಷ ಮುಹಮ್ಮದ್ ಸಲೀಂ, ಉದ್ಯಮಿ ಯು.ಎಸ್. ವಾಹೀದ್ ದಾವೂದ್ ಮಾತನಾಡಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷ ಮುಸ್ತಾಖ್ ಅಹ್ಮದ್ ಬೆಳ್ವೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ರಫೀಕ್ ಮಾಸ್ಟರ್, ಸಿನಾನ್ ಝಕರಿಯಾ, ಹನೀಫ್ ಪುತ್ತೂರು, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹುಸೈನ್ ಕಾರ್ಕಳ, ಕೋಶಾಧಿಕಾರಿ ಅಬ್ದುಲ್ ಹಮೀದ್ ಮೂಡಬಿದಿರೆ, ಜಿಲ್ಲಾ ಕೋಶಾಧಿಕಾರಿ ಸೈಯ್ಯದ್ ಅಜ್ಮಲ್ ಶಿರೂರು, ಕುಂದಾಪುರ ತಾಲೂಕು ಅಧ್ಯಕ್ಷ ಎಸ್.ದಸ್ತಗಿರ್ ಕಂಡ್ಲೂರು, ಉಡುಪಿ ತಾಲೂಕು ಅಧ್ಯಕ್ಷ ನಝೀರ್ ನೇಜಾರು, ಕಾರ್ಕಳ ತಾಲೂಕು ಅಧ್ಯಕ್ಷ ಶಾಕೀರ್ ಹುಸೈನ್ ಶಿಶಾ, ಕಾಪು ತಾಲೂಕು ಅಧ್ಯಕ್ಷ ಅಶ್ರಫ್ ಪಡುಬಿದ್ರಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಶೌಕತ್ ಅಲಿ ಬಾರಕೂರು, ಇನಾಯತುಲ್ಲಾ, ಯೂನಿಸ್ ಬ್ರಹ್ಮಾವರ, ಶೇಖ್ ಪರ್ವೇಜ್ ಮದನಿ, ಹಂಝಾತ್ ಹೆಜಮಾಡಿ, ಫಯಾಜ್ ಮೊದಲಾದವರು ಉಪಸ್ಥಿತರಿದ್ದರು.  

ಅಹ್ಮದ್ ಸಹೂದ್ ಖಿರಾಅತ್ ಪಠಿಸಿದರು. ಒಕ್ಕೂಟದ ಪ್ರಧಾನ ಕಾರ್ಯ ದರ್ಶಿ ಮೌಲಾನ ಝಮೀರ್ ಅಹ್ಮದ್ ರಶದಿ ಸ್ವಾಗತಿಸಿದರು. ಉಪಾಧ್ಯಕ್ಷ ಅಬು ಮುಹಮ್ಮದ್ ಕುಂದಾಪುರ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಹುಸೈನ್ ಹೈಕಾಡಿ ಕಾರ್ಯಕ್ರಮ ನಿರೂಪಿಸಿದರು.

Similar News