ಭಾರೀ ದುರಂತ ಸಂಭವಿಸಿದ ಮೂರು ದಿನಗಳ ನಂತರ ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
Update: 2023-06-05 06:17 GMT
ಹೊಸದಿಲ್ಲಿ: ಒಡಿಶಾದ ಬಾಲಸೋರ್ನಲ್ಲಿ 275 ಜನರ ಸಾವಿಗೆ ಕಾರಣವಾದ ಭೀಕರ ಮೂರು ರೈಲು ಅಪಘಾತ ನಡೆದ ಮೂರು ದಿನಗಳ ನಂತರ ಸುಣ್ಣದ ಕಲ್ಲು ಸಾಗಿಸುತ್ತಿದ್ದ ಮತ್ತೊಂದು ಗೂಡ್ಸ್ ರೈಲು ಇತ್ತೀಚಿನ ಭೀಕರ ಅಪಘಾತ ಸಂಭವಿಸಿದ ಸ್ಥಳದಿಂದ ಸುಮಾರು 500 ಕಿಮೀ ದೂರದಲ್ಲಿರುವ ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.
ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಹಾಗೂ ಕೆಲವು ಬೋಗಿಗಳು ಮಾತ್ರ ಹಳಿತಪ್ಪಿವೆ ಎಂದು ವರದಿಯಾಗಿದೆ.
ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಲೈನ್, ವ್ಯಾಗನ್ಗಳು ಹಾಗೂ ಲೊಕೊಮೊಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.