ಸಂತ್ರಸ್ತ ವಿದ್ಯಾರ್ಥಿಗಳಿಗೆ ಉಳ್ಳಾಲ ಪೊಲೀಸರಿಂದ ಹಲ್ಲೆ ಆರೋಪ: ಪೊಲೀಸ್ ಕಮಿಷನರ್‌ಗೆ ದೂರು

ಉಳ್ಳಾಲ ಅನೈತಿಕ ಪೊಲೀಸ್ ಗಿರಿ ಪ್ರಕರಣ

Update: 2023-06-05 07:07 GMT

ಮಂಗಳೂರು, ಜೂ.5: ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ನಡೆದ ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿರುವ ಮಧ್ಯೆಯೇ ದೂರು ನೀಡಿದ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆಗಾಗಿ ನಮ್ಮನ್ನು ಠಾಣೆಗೆ ಕರೆಯಿಸಿದ ಉಳ್ಳಾಲ ಎಸ್ಸೈ ಸಂತೋಷ್ ಖಾಲಿ ಕಾಗದಕ್ಕೆ ಬಲವಂತವಾಗಿ ಸಹಿ ಹಾಕಿಸಿದ್ದಾರೆ. ಇದನ್ನು ಪ್ರಶ್ನಿಸಿದ ತನಗೆ ಹಲ್ಲೆಗೈದಿದ್ದಾರೆ ಎಂದು ವಿದ್ಯಾರ್ಥಿಯೊಬ್ಬ ಕಮಿಷನರ್ ಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾನೆ. 

ವಿದ್ಯಾರ್ಥಿನಿಯರನ್ನು ಕೂಡಾ ಪೊಲೀಸರು ಠಾಣೆಗೆ ಕರೆಯಿಸಿ, ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Similar News