ಉಡುಪಿ: ವಿಶ್ವ ಬೈಸಿಕಲ್ ದಿನಾಚರಣೆ

Update: 2023-06-05 14:31 GMT

ಉಡುಪಿ, ಜೂ.5: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ಸೈಕಲ್ ಕ್ಲಬ್ ಉಡುಪಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಎನ್‌ಸಿಡಿ ಘಟಕ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಬೈಸಿಕಲ್ ಜಾಥಾವನ್ನು ಆಯೋಜಿಲಾಗಿತ್ತು.  

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ ಮಾತ ನಾಡಿ, ಇತ್ತೀಚಿನ ದಿನಗಳಲ್ಲಿ ಆಹಾರ ಕ್ರಮದಲ್ಲಾದ ಬದಲಾವಣೆ, ತಂಬಾಕು ಸೇವನೆ, ಮದ್ಯಪಾನ, ದೈಹಿಕ ಚಟುವಟಿಕೆಗಳ ಕೊರತೆ ಹಾಗೂ ಪರಿಸರ ಮಾಲಿನ್ಯದಿಂದ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದರ ಬಗ್ಗೆ ಅರಿವನ್ನು ಮೂಡಿಸುವ ಉದ್ದೇಶದಿಂದ ಸೈಕಲ್ ಜಾಥಾವನ್ನು ಆಯೋಜಿಲಾಗಿದೆ ಎಂದರು.  

ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಎನ್‌ಸಿಡಿ ವಿಭಾಗದ ಡಾ.ಅಂಜಲಿ, ದೇಹ ಮತ್ತು ಮನಸ್ಸಿನ ಮೇಲಾಗುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಸೈಕಲ್ ಕ್ಲಬ್‌ನ ಸಂಚಾಲಕ ಡಾ.ಗುರುರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾದ್ಯಾಯ ಉಪಸ್ಥಿತ ರಿದ್ದರು.

ಅಂಬಲಪಾಡಿ ಜಂಕ್ಷನ್‌ನಿಂದ ಪ್ರಾರಂಭಗೊಂಡ ಜಾಥಾವು ರಾಷ್ಟ್ರೀಯ ಹೆದ್ದಾರಿ ಮೂಲಕ ಕಾಪು ಮಾರ್ಗವಾಗಿ ಪಡುಕೆರೆ ಬೀಚ್ ಮುಖಾಂತರ ಸಾಗಿ ತೊಟ್ಟಂ ಆಸರೆ ಬೀಚ್‌ನಲ್ಲಿ ಮುಕ್ತಾಯಗೊಂಡಿತು.

Similar News