ಉಡುಪಿ: ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

Update: 2023-06-05 16:58 GMT

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜ ದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಜನವಿರೋಧಿ ನೀತಿಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಯಲ್ಲಿ ಜನತೆಗೆ ಎಸಗಿದ ಮೋಸ ಮತ್ತು ಕಾಂಗ್ರೆಸ್ಸಿನ ಜನ ವಿರೋಧಿ ನೀತಿಯನ್ನು ಖಂಡಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯ ದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಮೋರ್ಚಾಗಳ ಸಂಯೋಜಕರಾದ ಜಗ ದೀಶ್ ಆಚಾರ್ಯ ಕಪ್ಪೆಟ್ಟು, ವಿಜಯ ಕುಮಾರ್ ಉದ್ಯಾವರ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

Similar News