ಕಾಸರಗೋಡು: ಅಕ್ರಮ ಚಿನ್ನ ಸಾಗಾಟ; ಓರ್ವನ ಬಂಧನ

Update: 2023-06-06 06:23 GMT

ಕಾಸರಗೋಡು: ಅಕ್ರಮ ಚಿನ್ನ ಸಾಗಾಟಕ್ಕೆ  ಸಂಬಂಧಪಟ್ಟಂತೆ ಓರ್ವನನ್ನು ಡಿ ವೈ ಎಸ್ಪಿ   ಪಿ. ಬಾಲಕೃಷ್ಣನ್  ನೇತೃತ್ವದ  ಪೊಲೀಸರು ಬಂಧಿಸಿದ್ದಾರೆ. 

ಇಂದು ಬೆಳಿಗ್ಗೆ  ಬೇಕಲ ಸಮೀಪದ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.  ಪ್ರಕರಣಕ್ಕೆ  ಸಂಬಂಧಪಟ್ಟಂತೆ ಚಿತ್ತಾರಿಯ ನಿಝಾರ್ (36) ಎಂಬಾತನನ್ನು ಬಂಧಿಸಲಾಗಿದ್ದು, ಕಾರಿನಲ್ಲಿದ್ದ 858 ಗ್ರಾಂ ಚಿನ್ನ ವಶಪಡಿಸಿ ಕೊಳ್ಳ ಲಾಗಿದೆ .

ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರಿ ನಲ್ಲಿ ಬರುತ್ತಿದ್ದಾಗ ತಪಾಸಣೆ ನಡೆಸಲಾಗಿದ್ದು, ಬ್ಯಾಗ್ ನಲ್ಲಿ  ಎಮರ್ಜೆನ್ಸಿ ಲೈಟ್ ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News