ಡಾ. ಎಂ.ಡಿ. ಸುಭಾಷ್ ಚಂದ್ರನ್ ಗೆ ಮುಖ್ಯಮಂತ್ರಿಗಳಿಂದ ಪರಿಸರ ಪ್ರಶಸ್ತಿ ಪ್ರದಾನ

Update: 2023-06-06 07:01 GMT

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ರಾಜ್ಯದ ಖ್ಯಾತ ಪರಿಸರ ವಿಜ್ಞಾನಿ ಯಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ಡಾ. ಎಂ.ಡಿ. ಸುಭಾಷ್ ಚಂದ್ರನ್ ರವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪರಿಸರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಡಾ.ಸುಭಾಷ್ ಚಂದ್ರರವರು ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನ ಪರಿಸರ ವಿಜ್ಞಾನ ಕೇಂದ್ರದಲ್ಲಿ ಸಂದರ್ಶಕ ವಿಜ್ಞಾನಿಯಾಗಿದ್ದು ಹಾಗೂ ರಾಜ್ಯ ಕಡಲ ತೀರ ವಲಯ ನಿರ್ವಹಣಾ ಪ್ರಾಧಿಕಾರದ ಸದಸ್ಯರು ಆಗಿದ್ದರು. 

ಕರಾವಳಿ ಮತ್ತು ಪಶ್ಚಿಮ ಘಟ್ಟದ ಪರಿಸರದ ಸಂಶೋಧನೆಯಲ್ಲಿ ಹಲವಾರು ಸಂಶೋಧನಾ ಪ್ರಬಂಧಗಳನ್ನು ಮತ್ತು ಲೇಖನಗಳನ್ನು ಬರೆದಿರುವ ಸುಭಾಷ್ ಚಂದ್ರನ್ ರಿಗೆ ಸಂದ ಗೌರವಕ್ಕೆ ಅವರ ಅಪಾರ ಶಿಷ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

Similar News