ಸೂಲಿಬೆಲೆ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯಕ್ತಿ: ಸಚಿವ ಸತೀಶ್ ಜಾರಕಿಹೊಳಿ

Update: 2023-06-06 13:28 GMT

ಬೆಳಗಾವಿ: 'ಚಕ್ರವರ್ತಿ ಸೂಲಿಬೆಲೆ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯಕ್ತಿ' ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮಂಗಳವಾರ ಗೋಕಾಕ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ಹೇಳದಿರುವ ಭರವಸೆಗಳನ್ನು ಆತನೇ ಹೇಳುತ್ತಾನೆ. ಸೂಲಿಬೆಲೆಯ ಹೇಳಿಕೆಗಳಿಂದ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ' ಎಂದು ದೂರಿದರು. 

ಇತ್ತೀಚೆಗೆ ಸಚಿವ ಎಂ.ಬಿ.ಪಾಟೀಲ್ ಅವರ ಸೂಲಿಬೆಲೆ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಂ.ಬಿ.ಪಾಟೀಲ್ ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ ಅಷ್ಟೇ' ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ;​ ಅನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ 'ಆ್ಯಂಟಿ ಕಮ್ಯುನಲ್‌ ವಿಂಗ್': ಗೃಹ ಸಚಿವ ಡಾ. ಜಿ. ಪರಮೇಶ್ವರ್

ಗೋವು ಹತ್ಯೆ ನಿಷೇಧದ ಬಗ್ಗೆ ಚರ್ಚೆ ನಡೆದಿಲ್ಲ;

'ಗೋವು ಹತ್ಯೆ ನಿಷೇಧದ ಬಗ್ಗೆ ಈ ವರೆಗೆ ಸರಕಾದ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ತಿಳಿಸಿದರು. 

Similar News