ದ.ಕ.ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Update: 2023-06-06 15:00 GMT

ಮಂಗಳೂರು, ಜೂ.6: ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ಮಳೆಯೊಂದಿಗೆ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದೆ. ಹಾಗಾಗಿ ನದಿ, ಸಮುದ್ರ ಕಿನಾರೆಯ ಬಳಿ ತೆರಳಬಾರದು. ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೂ ತೆರಳದಂತೆ ಡಿಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News