ಹಾವೇರಿ: ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ
Update: 2023-06-07 06:45 GMT
ಹಾವೇರಿ, ಜೂ.7: ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದು ಪತಿಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾವೇರಿ ತಾಲೂಕಿನ ಸಂಗೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ದ್ರಾಕ್ಷಾಯಣೆವ್ವ (45) ಹತ್ಯೆಗೀಡಾದವಳು. ಆಕೆಯ ಪತಿ ಪ್ರಭು ವಾರತಿ (52) ಆತ್ಮಹತ್ಯೆ ಮಾಡಿಕೊಂಡವ. ಪತ್ನಿಯ ಶೀಲ ಶಂಕಿಸಿ ಪತಿ ಪ್ರಭು ವಾರತಿ ಪ್ರತಿನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಜಗಳ ಅತಿರೇಕಕ್ಕೆ ತಿರುಗಿದ್ದು, ದ್ರಾಕ್ಷಾಯಣೆವ್ವರ ಮೇಲೆ ಪ್ರಭು ವಾರತಿ ಮಚ್ಚಿನಿಂದ ದಾಳಿ ಮಾಡಿದನೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ದ್ರಾಕ್ಷಾಯಣೆವ್ವ ಮೃತಪಟ್ಟಿದ್ದಾರೆ. ಬಳಿಕ ಪ್ರಭು ವಾರತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಗುಣಾರೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.