ಮಂಗಳೂರು: ಜೂ.10ರಂದು ಜಿಲ್ಲಾ ಯುವ ಉತ್ಸವ

Update: 2023-06-07 12:04 GMT

ಮಂಗಳೂರು, ಜೂ.7: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂ.10ರಂದು 10.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರಭವನದ ಮಿನಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶವಂತ್ ಯಾದವ್ ತಿಳಿಸಿದ್ದಾರೆ.

ನಗರದ ಪ್ರತಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಉತ್ಸವ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಪೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9 ರಿಂದ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ  ಸ್ಪರ್ಧೆಗಳ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಯುವಕ - ಯುವತಿಯರಿಗೆ 15 ರಿಂದ 29 ವಯಸ್ಸಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0824-2422264 ಅಥವಾ 9611134944 ಅನ್ನು ಸಂಪರ್ಕಿಸುವಂತೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕೇಂದ್ರದ ಆಡಳಿತಧಿಕಾರಿ ಜಗದೀಶ್ ಕೆ ಹಾಗೂ ಕಾರ್ಯಕ್ರಮ ಮೇಲ್ವಿಚಾರಕ ಸುಸೈಮಣಿ ಉಪಸ್ಥಿತರಿದ್ದರು.

Similar News