ಮಡಿಕೇರಿ: ಕಾವೇರಿ ನದಿಯಲ್ಲಿ ಮುಳುಗಿ ಕಾರ್ಮಿಕ ಮೃತ್ಯು

Update: 2023-06-07 14:38 GMT

ಮಡಿಕೇರಿ ಜೂ.7 : ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಾಪೋಕ್ಲು ಸಮೀಪ ವರದಿಯಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್ (34) ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ.

ನಾಪೋಕ್ಲು ಸಮೀಪದ ಹಳೆ ತಾಲೂಕಿನಲ್ಲಿ ಕಳೆದ ಎರಡು ತಿಂಗಳಿಂದ ಸಹೋದ್ಯೋಗಿಗಳೊಂದಿಗೆ ಕಟ್ಟಡ ಕಾಮಗಾರಿ ಕೆಲಸಕ್ಕೆಂದು ಕೇರಳದ ಕಣ್ಣೂರಿನಿಂದ ಬಂದಿದ್ದ ಶ್ರೀಜೇಶ್, ಬುಧವಾರ ಮಧ್ಯಾಹ್ನ ಮೂರು ಜನ ಸಹೋದ್ಯೋಗಿಗಳೊಂದಿಗೆ ಚೆರಿಯಪರಂಬು ಗ್ರಾಮದಲ್ಲಿರುವ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ನಾಪೋಕ್ಲು  ಠಾಣಾಧಿಕಾರಿ ಮಂಜುನಾಥ್, ಎಎಸ್‍ಐ ಗೋಪಾಲಕೃಷ್ಣ, ಸಿಬ್ಬಂದಿಗಳಾದ ರವಿಕುಮಾರ್, ಶರತ್, ಲವ ಕುಮಾರ್, ಶರೀಫ್, ಪ್ರಸನ್ನ, ಗಣೇಶ್, ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. 

ಮೃತ ದೇಹವನ್ನು ನಾಪೋಕ್ಲು ವಾಹನ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ಸ್ಥಳೀಯರಾದ, ಹನೀಫ್, ಕರೀಮ್, ರಝಾಕ್, ಒಂದು ಗಂಟೆಯ ಕಾಲ ನೀರಿನಲ್ಲಿ ಹುಡುಕಾಡಿ ಮೃತ ದೇಹವನ್ನು ಮೇಲೆತ್ತುವಲ್ಲಿ ಸಹರಿಸಿದರು.

Similar News