ಬಿಪೊರ್‌ಜಾಯ್‌ ಚಂಡಮಾರುತ: ಮೀನುಗಾರರಿಗೆ ಮುನ್ನೆಚ್ಚರಿಕೆ

Update: 2023-06-07 14:56 GMT

ಮಂಗಳೂರು, ಜೂ.7: ಹವಾಮಾನ ಮುನ್ಸೂಚನೆಯಂತೆ ಜೂ.11ರವರೆಗೆ ಬಿಪೊರ್‌ಜಾಯ್‌ ಚಂಡಮಾರುತ ದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿರುತ್ತದೆ. ಈ ಸಂದರ್ಭ ಸಂಭವಿಸುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Similar News