ಉಳ್ಳಾಲ ದರ್ಗಾ ಸಮಿತಿ ವತಿಯಿಂದ ಪರಿಸರ ದಿನಾಚರಣೆ

Update: 2023-06-07 17:37 GMT

ಉಳ್ಳಾಲ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಳ್ಳಾಲ ದರ್ಗಾ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮವು ಸೆಯ್ಯದ್ ಮದನಿ ಅರೆಬಿಕ್ ಕಾಲೇಜು ಆವರಣದಲ್ಲಿ  ನಡೆಯಿತು.

ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಿಹಾಬ್ ಸಖಾಫಿ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಂಶುಪಾಲರಾದ  ಅಹ್ಮದ್ ಕುಟ್ಟಿ ಶಖಾಫಿ ದುಆ ನೆರವೇರಿಸಿದರು. ಇಬ್ರಾಹಿಂ ಅಹ್ಸನಿ ಸ್ವಾಗತಿಸಿದರು. ನಜೀಬ್ ನೂರಾನಿ ಧನ್ಯವಾದ ಸಮರ್ಪಿಸಿದರು. ಹಾಫಿಲ್ ಜಮಾಲ್ ನೂರಾನಿ ಕಾರ್ಯಕ್ರಮ ನಿರೂಪಿಸಿದರು.

ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ, ಹಸೈನಾರ್ ಕೋಟೆಪುರ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಜತೆ ಕಾರ್ಯದರ್ಶಿಗಳಾದ ಇಸಾಕ್ ಮೇಲಂಗಡಿ, ಮುಸ್ತಫಾ ಮದನಿ ನಗರ, ಕೋಶಾಧಿಕಾರಿ ನಾಝಿಮ್ ಮುಕಚೇರಿ, ಲೆಕ್ಕ ಪರಿಶೋಧಕ ಫಾರೂಕ್ ಯು.ಎಚ್. ಕಲ್ಲಾಪು, ಸಮಿತಿ ಸದಸ್ಯರಾದ ಝೈನಾಕ ಮೇಲಂಗಡಿ, ಫಾರೂಕ್‌ ಮುಕ್ಕಚ್ಚೆರಿ ಮತ್ತಿತರರು ಉಪಸ್ಥಿತರಿದ್ದರು.

Similar News