ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್

Update: 2023-06-08 06:47 GMT

ತುಮಕೂರು: 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಅಂತಾ ಗೊಂದಲದಲ್ಲಿದ್ದೇನೆ' ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕುಣಿಗಲ್ ನ ಗಿರಿಗೌಡ ಪಾಲ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು,  'ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಅಂತಾ ಗೊಂದಲದಲ್ಲಿದ್ದೇನೆ, ರಾಜಕಾರಣದಲ್ಲಿ ಇರಬೇಕೋ ಬೇಡವೋ ಅಂತಾ ಗೊಂದಲದಲ್ಲಿದ್ದೇನೆ' ಎಂದು ಹೇಳಿದ್ದಾರೆ.

ಸಂಸದರು ಈ ಹೇಳಿಕೆ ನೀಡುತ್ತಿದ್ದಂತೆ ಅಲ್ಲಿದ್ದ ಕಾರ್ಯಕರ್ತರು ಹಾಗೂ ಬೆಂಬಲಿಗರು ನೀವು ಸ್ಪರ್ಧಿಸಲೇ ಬೇಕು ಎಂದು ಒತ್ತಾಯಿಸಿದ್ದಾರೆ. 

''ಮುಂದಿನ ದಿನಗಳಲ್ಲಿ ನಿಮ್ಮ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವೆ. ನನ್ನ ಗುರಿ ಇರೋದು ನಿಮ್ಮಗಳ ಸೇವೆ ಮಾಡೋದು. ಕುಣಿಗಲ್ ತಾಲೂಕನ್ನು ಮಾದರಿ ತಾಲೂಕು ಮಾಡುವುದು ನನ್ನ ಗುರಿ'' ಎಂದು ಇದೇ ವೇಳೆ ಕಾರ್ಯಕರ್ತರಿಗೆ ಡಿ.ಕೆ ಸುರೇಶ್ ಭರವಸೆ ನೀಡಿದರು. 

Similar News