ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ; ರಾಜಕಾಲುವೆ, ಚರಂಡಿ ಪರಿಶೀಲನೆ

Update: 2023-06-08 08:57 GMT

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡಿಎ ಕೇಂದ್ರ ಕಚೇರಿಯಿಂದ ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದ್ದಾರೆ.

ಬಿಎಂಟಿಸಿ ವೋಲ್ವೋ ಬಸ್​ನಲ್ಲಿ ಕಾವೇರಿ ಜಂಕ್ಷನ್, ಮೇಖ್ರಿ ಸರ್ಕಲ್, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, HAL ಏರ್​ಪೋರ್ಟ್ ರಸ್ತೆ, ಮಣಿಪಾಲ್ ಆಸ್ಪತ್ರೆ ಬಳಿ ಸಂಚರಿಸಿ ರಾಜಕಾಲುವೆ, ಚರಂಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 'ಮಳೆಗಾಲ ಆರಂಭವಾಗುತ್ತಿದ್ದು, ಎಲ್ಲೆಲ್ಲಿ ನೀರು ನಿಲ್ಲುತದೆಯೋ ಅಂತಹ ಅತ್ಯಂತ ಪ್ರಮುಖ ಪ್ರದೇಶಗಳಿಗೆ ಇಂದು ಭೇಟಿ ನೀಡುತ್ತಿದ್ದೇನೆ. ಮಳೆ ಬಂದಾಗ ಸಮಸ್ಯೆ ಎದುರಾದರೆ ಅದನ್ನು ನಿಭಾಯಿಸಲು ಯಾವ ಕಾರ್ಯಯೋಜನೆ ರೂಪಿಸಿದ್ದೀರಿ ಎಂದು ಮಾಹಿತಿ ಪಡೆದಿದ್ದೇನೆ' ಎಂದು ತಿಳಿಸಿದರು.

'ಮಳೆ ಬಂದಾಗ ಸಮಸ್ಯೆ ಉಂಟಾಗಿ ಬೆಂಗಳೂರು ನಗರಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ' ಎಂದರು.

Similar News