ಇನ್ನೂ ಅಂತಿಮಗೊಂಡಿಲ್ಲ ವಿಪಕ್ಷ ನಾಯಕನ ಆಯ್ಕೆ; ಬಿಜೆಪಿ ಶಾಸಕರ ವೈಯಕ್ತಿಕ ಅಭಿಪ್ರಾಯ ಸಂಗ್ರಹ!

Update: 2023-06-09 03:57 GMT

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿಂದು ನಡೆದ ನೂತನ ಶಾಸಕರ ಜೊತೆಗಿನ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ವೈಯಕ್ತಿಕ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.

ಶಾಸಕರ ಜೊತೆಗಿನ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ' ಎಂದರು.

ಅಲ್ಲದೇ, 'ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ  ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಮುಂದೆ ಏನೆಲ್ಲಾ ಮಾಡಬೇಕು ಎನ್ನುವ ಕುರಿತಂತೆ  ಚರ್ಚೆ ಮಾಡಲಾಗಿದೆ' ಎಂದು ತಿಳಿಸಿದರು.

ವಿಪಕ್ಷ ನಾಯಕನ ರೇಸ್‌ ನಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್‌ ಯತ್ನಾಳ್, ಅಶ್ವತ್ಥ ನಾರಾಯಣ, ಆರ್ ಅಶೋಕ್, ಸುರೇಶ್ ಕುಮಾರ್, ಸುನೀಲ್ ಕುಮಾರ್ ಹೆಸರುಗಳು ಮುಂಚೂಣಿಯಲ್ಲಿವೆ.

Similar News