ಕಾಣೆಯಾದ ಯುವಕನ ಪತ್ತೆಗೆ ಮನವಿ

Update: 2023-06-08 14:09 GMT

ಮಂಗಳೂರು, ಜೂ.8: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿ ಕಿಶನ್ ಕುಮಾರ್ ಶೆಟ್ಟಿ (29) ಮಾ.30ರಿಂದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಾಣೆಯಾಗಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5.9 ಅಡಿ ಎತ್ತರ, ಗೋಧಿ ಮೈ ಬಣ್ಣ, ಕೋಲು ಮುಖ,  ಸಾಧಾರಣ  ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪುಮತ್ತು ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಕಪ್ಪುಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ.

ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ ಕೊಣಾಜೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಎಸ್ಸೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News