​ಗಾಂಜಾ ಸೇವನೆ: ಆರೋಪಿಗಳ ಸೆರೆ

Update: 2023-06-08 15:52 GMT

ಮಂಗಳೂರು : ನಗರದ ಉರ್ವಸ್ಟೋರ್ ಮಾರ್ಕೆಟ್ ಗ್ರೌಂಡ್ ಬಳಿ ಬುಧವಾರ ರಾತ್ರಿ 8:45ಕ್ಕೆ ಗಾಂಜಾ ಸೇವಿಸಿ ತಿರುಗಾಡುತ್ತಿದ್ದ ಹಿತೇಶ್ ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ತಕ್ಷಣ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವಿಸಿರು ವುದು ದೃಢಪಟ್ಟ ಹಿನ್ನಲೆಯಲ್ಲಿ ಬಂಧಿಸಿ ಕಾನೂನು ಕ್ರಮ ಜರಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂ.7ರಂದು ನಗರದ ನೆಹರೂ ಮೈದಾನದ ಪಾರ್ಕ್ ಬಳಿ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ತಸ್ಲೀಫ್ ಎಂಬಾತ ಗಾಂಜಾ ಸೇವನೆ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

Similar News