ಕಾರ್ಕಳ : ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

Update: 2023-06-08 16:35 GMT

ಕಾರ್ಕಳ : ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ದ್ವಿಚಕ್ರ ವಾಹನ ಹಾಗೂ ಬಸ್ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.

ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತರು ಎಂದು ಗುರುತಿಸಲಾಗಿದೆ.

ಕಾರ್ತಿಕ್ ಬೈಲೂರಿನಿಂದ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಕಾರ್ತಿಕ್‌ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Similar News