ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಗಳಿಬ್ಬರ ಅಮಾನತು

Update: 2023-06-08 16:54 GMT

ಬೆಂಗಳೂರು, ಜೂ.8: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್‍ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು 2.76 ಕೋಟಿ ರೂ. ನಷ್ಟಕ್ಕೆನೇರಾ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಅದೇ ರೀತಿ, ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರಕಾರಕ್ಕೆ ಒಟ್ಟು 1.3 ಕೋಟಿ ರೂ. ನಷ್ಟಮಾಡಿದ್ದ ಕಾರ್ಯಪಾಲಕ ಇಂಜಿನಿಯರ್‍ಬಸವರಾಜ. ಕೆ .ಹಲಚೇರಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

Similar News