ಲಾರಿ ತಡೆದು ಹಣ ವಸೂಲಿ ಆರೋಪ; ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರು ಅಮಾನತು

Update: 2023-06-09 04:41 GMT

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನ ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಓರ್ವ ಎಎಸ್ಐ  ಸೇರಿ ಇಬ್ಬರು ಪೊಲೀಸರನ್ನ ಅಮಾನತು ಮಾಡಲಾಗಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಮತ್ತು ಜೀಪ್ ಚಾಲಕ ಚಿಕ್ಕಹನುಮಯ್ಯ,(ಡಿಎಆರ್) ರವರುಗಳು ಲಾರಿ ಚಾಲಕರುಗಳಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಶಿರಾ ಠಾಣೆಯ ಇನ್ಸ್‌ಪೆಕ್ಟರ್ ರವರು ನೀಡಿರುವ ವರದಿಯ ಮೇಲೆ ಎಸ್ಪಿ ರಾಹುಲ್ ಕುಮಾರ್ ಇಬ್ಬರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. 

ಲಾರಿಗಳನ್ನ ತಡೆದು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿತ್ತು.

Similar News