ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷೀಯ ನಾಯಕರ ವಿರುದ್ಧವೇ ಸಿಟಿ ರವಿ ಅಸಮಾಧಾನ

Update: 2023-06-09 10:59 GMT

ಹೊಸದಿಲ್ಲಿ: ''ನಮ್ಮ ಕಡೆಯಿಂದಲೂ ತಪ್ಪಾಗಿದೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ'' ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಹೊಸದಿಲ್ಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನಾಯಕರ ವಿರುದ್ಧದ ಹಗರಣಗಳ ತನಿಖೆ ನಡೆಸಬೇಕಿತ್ತು. ಯಾರು ತಪ್ಪು ಮಾಡಿದ್ದರೋ ಅವರನ್ನು ಬೀದಿಗಿಳಿಸಿ ರಾಜಕಾರಣ ಮಾಡಬೇಕಿತ್ತು, ಆದರೆ ಪಕ್ಷದಲ್ಲಿ ಕೆಲವರ  ಹೊಂದಾಣಿಕೆ ರಾಜಕಾರಣದಿಂದಲೇ ರಾಜ್ಯದಲ್ಲಿ ಬಿಜೆಪಿ ಸೋತಿದೆ' ಎಂದು ಹೇಳಿದರು. 

ಅಲ್ಲದೇ, ಸೋಲಾರ್ ಹಗರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಂಡಿದ್ದರೆ ನಮಗೆ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವಪಕ್ಷೀಯ ನಾಯಕರ ವಿರುದ್ಧವೇ ಅಸಮಾಧಾನ ಹೊರಹಾಕಿದರು. ಆದರೆ ಅವರು ಆ ಬಿಜೆಪಿ ನಾಯಕರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. 

Similar News