ಚಾಮರಾಜನಗರದ ಆಕ್ಸಿಜನ್​ ದುರಂತದ ಬಗ್ಗೆ ಮರುತನಿಖೆ: ಸಚಿವ ದಿನೇಶ್​ ಗುಂಡೂರಾವ್

Update: 2023-06-09 12:01 GMT

ಬೆಂಗಳೂರು: 36 ಜನರ ಸಾವಿಗೆ ಕಾರಣವಾದ ಚಾಮರಾಜನಗರದ ಆಕ್ಸಿಜನ್​ ದುರಂತದ ಬಗ್ಗೆ ಮರು ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹಿಂದಿನ ಸರ್ಕಾರ ಸರಿಯಾಗಿ ತನಿಖೆ ನಡೆಸಿಲ್ಲ, ಹೀಗಾಗಿ ಮರು ತನಿಖೆಗೆ ನಿರ್ಧರಿಸಿದ್ದೇವೆ' ಎಂದು ಹೇಳಿದರು.  

''ನಮ್ಮದೇ ಇಲಾಖೆಯಿಂದಲೇ ತನಿಖೆ ನಡೆಸಬೇಕಾ? ಅಥವಾ ಯಾವ ರೀತಿಯಲ್ಲಿ ತನಿಖೆ ಮಾಡಬೇಕು? ಎಂದು ಮುಖ್ಯಮಂತ್ರಿಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ'' ಎಂದು ತಿಳಿಸಿದರು. 

Similar News