ಲೋಕಸಭಾಧ್ಯಕ್ಷ ಓಂ ಬಿರ್ಲಾ - ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೌಹಾರ್ದ ಭೇಟಿ

Update: 2023-06-09 12:36 GMT

ಬೆಂಗಳೂರು : ರಾಜ್ಯ ವಿಧಾನಸಭೆಯ ನೂತನ ಅಧ್ಯಕ್ಷ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಗುರುವಾರ ಸೌಹಾರ್ದಯುತವಾಗಿ ಭೇಟಿ ಮಾಡಿ ಚರ್ಚಿಸಿದರು.

ಸದನದಲ್ಲಿ ನಿಯಮಾವಳಿಗಳಂತೆ ಚರ್ಚೆಗೆ ಅವಕಾಶ ನೀಡಬೇಕು, ಧರಣಿ ಮತ್ತು ಗದ್ದಲಗಳಿಗೆ ಆಸ್ಪದ ನೀಡದೆ ಕಾರ್ಯಕಲಾಪಗಳು ಸುಗಮವಾಗಿ ನಡೆಸಿಕೊಂಡು ಹೋಗುವಂತೆ ಲೋಕಸಭಾಧ್ಯಕ್ಷರು ಸಲಹೆ ನೀಡಿದರು.

Similar News