ಜೂ.11: ದ.ಕ.ಜಿಲ್ಲಾ ನೂತನ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರಿಗೆ ಆಗಮಿಸಲಿರುವ ದಿನೇಶ್ ಗುಂಡೂರಾವ್

Update: 2023-06-09 15:50 GMT

ಮಂಗಳೂರು, ಜೂ.9: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ ದಿನ ರಾತ್ರಿ ಬೆಂಗಳೂರಿಗೆ ಮರಳಲಿದ್ದಾರೆ.

ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30ಕ್ಕೆ ಬಿಜೈಯಲ್ಲಿರುವ ಸರಕಾರಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3ಕ್ಕೆ ದ.ಕ.ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿಪರಿಶೀಲನೆ ಮಾಡುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Similar News