ಯಾವುದೇ ಷರತ್ತಿಲ್ಲದೇ ಮಹದೇವಪ್ಪನಿಗೂ ಸಿಗಬೇಕು, ಕಾಕಪಾಟಿಲನಿಗೂ ಕೊಡಬೇಕು: ಶಾಸಕ ಯತ್ನಾಳ್ ಕಿಡಿ

Update: 2023-06-10 13:11 GMT

ವಿಜಯಪುರ: 'ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರಕಾರದ ವಿರುದ್ಧ​ ಕಿಡಿ ಕಾರಿದ್ದಾರೆ.

''ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಬಿಲ್ ವಾಪಸ್ ಕಳಿಸಿ. 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಿನಮ್ರತೆಯಿಂದ ವಾಪಸ್​ ಕಳುಹಿಸಿ'' ಎಂದು ಸಾರ್ವಜನಿಕರಿಗೆ ಅವರಿಗೆ ಮನವಿ ಮಾಡಿದ್ದಾರೆ.

''ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ, ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ'' ಎಂದು ಕರೆ ನೀಡಿದ್ದಾರೆ.

''2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ. ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು'' ಎಂದು ಅವರು ಒ್ತತಾಯಿಸಿದ್ದಾರೆ. 

Similar News