ಕೆಪಿಸಿಸಿ ಕಟ್ಟಡ ನಿರ್ವಹಣ ಸಮಿತಿ ಅಧ್ಯಕ್ಷರನ್ನಾಗಿ ಎ.ಕೆಂಚೇಗೌಡ ನೇಮಕ

Update: 2023-06-10 18:28 GMT

ಬೆಂಗಳೂರು, ಜೂ. 10: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಭವನ ಹಾಗೂ ಕಟ್ಟಡಗಳ ‘ಕಟ್ಟಡ ನಿರ್ವಹಣ ಸಮಿತಿಯ ಅಧ್ಯಕ್ಷರನ್ನಾಗಿ ಎ.ಕೆಂಚೇಗೌಡ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಶಿವಕುಮಾರ್, ‘ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಬೆಂಗಳೂರು ನಗರದಲ್ಲಿ ಇರುವ ಕಾಂಗ್ರೆಸ್ ಭವನ, ಇಂದಿರಾ ಭವನ, ಭಾರತ್ ಜೋಡೋ ಸಭಾಂಗಣಗಳಲ್ಲಿ ದಿನನಿತ್ಯ ನಡೆಯುವ ಸಭೆ, ಸಮಾರಂಭಗಳನ್ನು ನೋಡಿಕೊಳ್ಳುವುದು ಹಾಗೂ ಸದರಿ ಕಟ್ಟಡಗಳು, ಸುಸಜ್ಜಿತ ಹಾಗೂ ವ್ಯವಸ್ಥಿತ ರೀತಿಯಲ್ಲಿ ಉಳಿಸಿಕೊಳ್ಳಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

Similar News