×
Ad

ಮಲ್ಪೆ: ಮೀನುಗಾರಿಕೆ, ಬಂದರು ಇಲಾಖಾಧಿಕಾರಿಗಳ ಸಭೆ

Update: 2023-06-13 17:23 IST

ಉಡುಪಿ, ಜೂ.13: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಸಭೆ ನಡೆಸಿದರು.

ಮುಂದಿನ ಮೀನುಗಾರಿಕಾ ಋತುವಿನ ಚಟುವಟಿಕೆಗೆ ಪೂರಕವಾಗಿ ಪಾಸ್ ಬುಕ್ ನವೀಕರಣ, ಬಂದರು ಸ್ವಚ್ಚತೆ, ಭದ್ರತೆ ಹಾಗೂ ಸುವ್ಯಸ್ಥಿತ ನಿರ್ವಹಣೆಗೆ ಸ್ಥಳೀಯ ಮೀನುಗಾರ ಸಂಘಟನೆಗಳಿಗೆ ನೀಡುವ ಬಗ್ಗೆ ಮಾರ್ಗಸೂಚಿ ತಯಾರಿಕೆ ಹಾಗೂ ಮೀನುಗಾರಿಕಾ ಚಟುವಟಿಕೆಗೆ ಪೂರಕ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಮಲ್ಪೆಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿವೇಕ್, ಬಂದರು ಇಲಾಖೆಯ ಅಭಿಯಂತ ಶ್ರೀನಿವಾಸ ಮೂರ್ತಿ, ಮಲ್ಪೆಮೀನುಗಾರರ ಸಂಘದ ಪದಾಧಿಕಾರಿ ಗಳು, ವಿವಿಧ ಮೀನುಗಾರ ಸಂಘಟನೆಗಳ ಮುಖಂಡರು, ಮಹಿಳಾ ಮೀನು ಗಾರ ಸಂಘದ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Similar News