ಪುಣಚ: ಅಟೋರಿಕ್ಷಾ ಪಲ್ಟಿ; ಚಾಲಕ ಮೃತ್ಯು
Update: 2023-06-13 21:16 IST
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.
ಜಗನ್ನಾಥ ಪೈಸಾರಿ (57) ಮೃತರು ಎಂದು ಗುರುತಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಅಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ಅವರ ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.
ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ 'ರಿಕ್ಷಾ ಜಗ್ಗಣ್ಣ' ಎಂದೇ ಗುರುತಿಸಲ್ಪಟ್ಟಿದ್ದರು.