×
Ad

ಇ-ಕೆವೈಸಿ ಮಾಡಿಸಿಕೊಳ್ಳಲು ರೈತರಿಗೆ ಸೂಚನೆ

Update: 2023-06-13 21:44 IST

ಮಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವು  ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

ಜಿಲ್ಲೆಯಲ್ಲಿ 1,53,351 ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದು, ಇದುವರೆಗೂ 1,16,835 ರೈತರು ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ. ಬಾಕಿ ಇರುವ ರೈತರು ಇ-ಕೆವೈಸಿ ಮಾಡಿಸಬೇಕಿದೆ.

ಸ್ಮಾರ್ಟ್ ಫೋನ್ ಬಳಸುವ ರೈತರು ಪೋರ್ಟಲ್‌ನ ಫಾರ್ಮರ್ಸ್‌ ಕೋರ್ನರ್‌ನ ಇ-ಕೆವೈಸಿ ಅವಕಾಶದಡಿ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ- ಕೆವೈಸಿ ಮಾಡಿಸಿಕೊ ಳ್ಳಬಹುದ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)/ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋ ಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News