ಇ-ಕೆವೈಸಿ ಮಾಡಿಸಿಕೊಳ್ಳಲು ರೈತರಿಗೆ ಸೂಚನೆ
ಮಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವು ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಜಿಲ್ಲೆಯಲ್ಲಿ 1,53,351 ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದು, ಇದುವರೆಗೂ 1,16,835 ರೈತರು ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ. ಬಾಕಿ ಇರುವ ರೈತರು ಇ-ಕೆವೈಸಿ ಮಾಡಿಸಬೇಕಿದೆ.
ಸ್ಮಾರ್ಟ್ ಫೋನ್ ಬಳಸುವ ರೈತರು
ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋ ಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.