×
Ad

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ವಿಚಾರಕ್ಕೆ ಸಂಬಂಧಿಸಿ ಹಲ್ಲೆ ಪ್ರಕರಣ; ಬಿಜೆಪಿ ಕಾರ್ಯಕರ್ತರಿಬ್ಬರಿಗೆ ನ್ಯಾಯಾಂಗ ಬಂಧನ

Update: 2023-06-14 14:13 IST

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ  ವಜಾಗೊಂಡ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು  ಬಂಟ್ವಾಳ ಡಿ.ವೈ ಎಸ್.ಪಿ ನೇತೃತ್ವದ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.


ಬಂಧಿತ ಆರೋಪಿಗಳನ್ನು  ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿರುವ ಉಮೇಶ್ ಕುಲಾಲ್(35) ಹಾಗೂ ರಂಜಿತ್ ಮದ್ದಡ್ಕ(30) ಎಂದು ಗುರುತಿಸಲಾಗಿದೆ.ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ  ಹಾಜರುಪಡಿಸಿದ ವೇಳೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಬ್ಬರು ಆರೋಪಿಗಳನ್ನು ಮಂಗಳೂರು ಸಬ್ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.


ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19)ರವರು ಮಹೇಶ್ ಶೆಟ್ಟಿ ತಿಮರೋಡಿ ಅವರ ಪರವಾಗಿ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಆತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಹಲ್ಲೆಗೊಳಗಾದ ಯಶವಂತ ಅವರು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಾಗಿ, ಪೊಲೀಸರಿಗೆ ನೀಡಿದ ದೂರಿನನ್ವಯ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ರಂಜಿತ್ ಮದಡ್ಕ ಮತ್ತಿತರರ ವಿರುದ್ಧ ಮೇ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬಳಿಕ ಆರೋಪಿಗಳು ತಲೆ ಮರೆಸಿಕೊಂಡು ನ್ಯಾಯಾಲಯದಿಂದ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದರು ಇದೀಗ ನ್ಯಾಯಾಲಯವು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Similar News