×
Ad

ಮಣಿಪುರದಲ್ಲಿ ಕೇಂದ್ರ ಸಚಿವರ ಮನೆಗೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದು ಕಳವಳಕಾರಿ: ಕೇಜ್ರಿವಾಲ್

Update: 2023-06-16 14:41 IST

ಹೊಸದಿಲ್ಲಿ: ಕಳೆದ ರಾತ್ರಿ 1,000ಕ್ಕೂ ಹೆಚ್ಚು ಜನರ ಗುಂಪೊಂದು ಕೇಂದ್ರ ಸಚಿವರೊಬ್ಬರ ಮನೆಗೆ ದಾಳಿ ನಡೆಸಿ ಬೆಂಕಿ ಹಚ್ಚಿದ ನಂತರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್  ಶುಕ್ರವಾರ  ಮಣಿಪುರದಲ್ಲಿನ  ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಇನ್ನೂ ಹೆಚ್ಚಿನ ಕೆಲಸ ಮಾಡಬೇಕಾಗಿದೆ ಎಂದು ಅವರು ಹೇಳಿದರು.

"ಮಣಿಪುರದ ಪರಿಸ್ಥಿತಿಯು ಇಡೀ ದೇಶಕ್ಕೆ ಕಳವಳಕ್ಕೆ ಕಾರಣವಾಗಿದೆ. ಬಹುಶಃ, ಶಾಂತಿಯನ್ನು ಪುನಃಸ್ಥಾಪಿಸಲು ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ" ಎಂದು  ಕೇಜ್ರಿವಾಲ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.  NDTV ಯ ಸುದ್ದಿ ವರದಿಯನ್ನು ಹಂಚಿಕೊಂಡಿದ್ದಾರೆ.

ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಸಾಕ್ಷಿಯಾಗಿರುವ ಈಶಾನ್ಯ ರಾಜ್ಯದಲ್ಲಿ ಗುರುರಾತ್ರಿ ತಡರಾತ್ರಿ ನಡೆದ ಹಿಂಸಾಚಾರದ ಘಟನೆಯಲ್ಲಿ, ಇಂಫಾಲ್‌ನಲ್ಲಿರುವ ಕೇಂದ್ರ ಸಚಿವ ಆರ್‌.ಕೆ. ರಂಜನ್ ಸಿಂಗ್ ಅವರ ಮನೆಗೆ ಜನ ರ ಗುಂಪು   ಬೆಂಕಿ ಹಚ್ಚಿತ್ತು. ರಾತ್ರಿ. ಘಟನೆ ವೇಳೆ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News